ಕ್ರಿಸ್ಮಸ್ ಬೈಬಲ್ ವಾಕ್ಯಗಳು

ಕ್ರಿಸ್ಮಸ್ ಬೈಬಲ್ ವಾಕ್ಯಗಳು

ಎಫ್ರಾತದ ಬೆತ್ಲೆಹೇಮೇ, ಜುದೇಯದ ಕುಲಗಳಲ್ಲಿ ನೀನು ಅತಿಚಿಕ್ಕವಳಾಗಿದ್ದರೂ ಇಸ್ರಯೇಲನ್ನು ಆಳತಕ್ಕವನು ನಿನ್ನಿಂದಲೇ ಉದಯಿಸುವನು. ಆತನ ಗೋತ್ರದ ಮೂಲ ಪುರಾತನವಾದುದು, ಅನಾದಿಕಾಲದಿಂದ ಬಂದುದು.

ಮೀಕ 5:2

ಆಗಲಿ, ಸರ್ವೇಶ್ವರ ನಿಮಗೊಂದು ಗುರುತನ್ನು ಕೊಡುವರು. ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು. ಇಮ್ಮಾನುವೇಲ್ ಎಂದು ಆತನಿಗೆ ಹೆಸರಿಡುವಳು.

ಯೆಶಾಯ 7:14

ಆತನು ಈ ಕುರಿತು ಆಲೋಚಿಸುತ್ತಿದ್ದಂತೆ, ದೇವದೂತನು ಕನಸಿನಲ್ಲಿ ಕಾಣಿಸಿಕೊಂಡು, “ದಾವೀದ ವಂಶದ ಜೋಸೆಫನೇ, ಮರಿಯಳನ್ನು ನಿನ್ನ ಪತ್ನಿಯನ್ನಾಗಿ ಸ್ವೀಕರಿಸಲು ಅಂಜಬೇಡ. ಆಕೆ ಗರ್ಭಧರಿಸಿರುವುದು ಪವಿತ್ರಾತ್ಮ ಪ್ರಭಾವದಿಂದಲೇ. ಆಕೆ ಒಬ್ಬ ಮಗನನ್ನು ಹೆರುವಳು. ಆತನಿಗೆ ನೀನು ‘ಯೇಸು’ ಎಂಬ ಹೆಸರಿಡಬೇಕು. ಏಕೆಂದರೆ ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸಿ ಉದ್ಧಾರಮಾಡುವವನು ಆತನೇ,” ಎಂದನು.

ಮತ್ತಾಯ 1:20-21

ದೇವರು ಲೋಕವನ್ನು ಎಷ್ಟಾಗಿ ಪ್ರೀತಿಸಿದರೆಂದರೆ ತಮ್ಮ ಏಕೈಕ ಪುತ್ರನನ್ನೇ ಧಾರೆಯೆರೆದರು; ಆತನಲ್ಲಿ ವಿಶ್ವಾಸವಿಟ್ಟ ಯಾರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ದೇವರ ಉದ್ದೇಶ.

ಯೊವಾನ್ನ 3:16

ಮಗುವೊಂದು ಹುಟ್ಟಿತೆಮಗೆ ವರಪುತ್ರನನು ಕೊಟ್ಟರೆಮಗೆ. ಆತನ ಕೈಯಲ್ಲಿಹುದು ರಾಜ್ಯಾಡಳಿತ ‘ಅದ್ಭುತಶಾಲಿ’, ಮಂತ್ರಿಶ್ರೇಷ್ಠ’ ‘ಪರಾಕ್ರಮದೇವ’, ‘ಅನಂತ ಪಿತ’, ‘ಶಾಂತಿ ನೃಪ’ – ಇವು ಆತನ ನಾಮಾಂಕಿತ.

ಯೆಶಾಯ 9:6

ಆ ದಿವ್ಯವಾಣಿ ಮನುಷ್ಯ ಆದರು. ಮನುಷ್ಯನಾಗಿ ನಮ್ಮೊಡನೆ ವಾಸಮಾಡಿದರು. ಅವರ ಮಹಿಮೆಯನ್ನು ನಾವು ನೋಡಿದೆವು, ಪಿತನಿಂದ ಪಡೆದ ಆ ಮಹಿಮೆ ಏಕೈಕ ಪುತ್ರನಿಗೆ ಮೀಸಲಾದ ಮಹಿಮೆಯೇ. ಎಂದೇ ಅವರು ವರಪ್ರಸಾದದಿಂದಲೂ ಸತ್ಯದಿಂದಲೂ ಪರಿಪೂರ್ಣರಾಗಿದ್ದರು.

ಯೊವಾನ್ನ 1:14

ಕಾಲವು ಪರಿಪಕ್ವವಾದಾಗ ದೇವರು ತಮ್ಮ ಪುತ್ರನನ್ನೇ ಕಳುಹಿಸಿಕೊಟ್ಟರು. ಇವರು ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡುಗಡೆ ಮಾಡುವುದಕ್ಕಾಗಿಯೂ ದೇವಪುತ್ರರ ಪದವಿಯನ್ನು ನಮಗೆ ಒದಗಿಸಿಕೊಡುವುದಕ್ಕಾಗಿಯೂ ಒಬ್ಬ ಸ್ತ್ರೀಯಲ್ಲಿ ಜನಿಸಿದರು. ಧರ್ಮಶಾಸ್ತ್ರಕ್ಕೆ ಅಧೀನರಾಗಿಯೇ ಹುಟ್ಟಿದರು.

ಗಲಾತ್ಯರಿಗೆ 4:4-5-4-5

ಆ ದೂತನು ಅವರಿಗೆ, “ಭಯಪಡಬೇಡಿ, ಇಗೋ, ಜನರೆಲ್ಲರಿಗೂ ಪರಮಾನಂದವನ್ನು ತರುವ ಶುಭಸಂದೇಶವನ್ನು ನಿಮಗೆ ತಿಳಿಸುತ್ತೇನೆ. ಅದೇನೆಂದರೆ, ಇಂದೇ ದಾವೀದನ ಊರಿನಲ್ಲಿ ನಿಮಗೋಸ್ಕರ ಲೋಕೋದ್ಧಾರಕ ಜನಿಸಿದ್ದಾರೆ. ಅವರೇ ಪ್ರಭು ಕ್ರಿಸ್ತ.

ಲೂಕ. 2:10-11

ತಕ್ಷಣವೇ ಆ ದೂತನ ಸಂಗಡ ಸ್ವರ್ಗದ ದೂತಪರಿವಾರವೊಂದು ಕಾಣಿಸಿಕೊಂಡಿತು. “ಮಹೋನ್ನತದಲ್ಲಿ ದೇವರಿಗೆ ಮಹಿಮೆ; ಭೂಲೋಕದಲ್ಲಿ ದೇವರೊಲಿದ ಮಾನವರಿಗೆ ಶಾಂತಿಸಮಾಧಾನ,” ಎಂದು ಸರ್ವೇಶ್ವರನ ಸ್ತುತಿ ಮಾಡಿತು.

ಲೂಕ. 2:13-14

ಜ್ಯೋತಿಷಿಗಳು ಅರಸನ ಮಾತಿಗೆ ತಲೆಬಾಗಿ ಹೊರಟರು. ಪೂರ್ವದಿಕ್ಕಿನಲ್ಲಿ ಮೊದಲೇ ಅವರಿಗೆ ಕಾಣಿಸಿಕೊಂಡಿದ್ದ ನಕ್ಷತ್ರ ಪುನಃ ಕಾಣಿಸಿಕೊಂಡಿತು. ಅವರು ಪರಮಾನಂದಭರಿತರಾದರು. ಆ ನಕ್ಷತ್ರ ಅವರ ಮುಂದೆ ಮುಂದೆ ಸಾಗುತ್ತಾ ಮಗು ಇದ್ದ ಸ್ಥಳದ ಮೇಲೆ ಬಂದು ನಿಂತುಬಿಟ್ಟಿತು. ಜ್ಯೋತಿಷಿಗಳು ಆ ಮನೆಯನ್ನು ಪ್ರವೇಶಿಸಿ ಮಗುವನ್ನು ತಾಯಿ ಮರಿಯಳ ಬಳಿ ಕಂಡು ಅದಕ್ಕೆ ಸಾಷ್ಟಾಂಗವೆರಗಿ ಆರಾಧಿಸಿದರು. ತಮ್ಮ ತಮ್ಮ ಬೊಕ್ಕಸಗಳನ್ನು ಬಿಚ್ಚಿ ಚಿನ್ನ, ಪರಿಮಳದ್ರವ್ಯ ಮತ್ತು ರಕ್ತಬೋಳ ಇವುಗಳನ್ನು ಮಗುವಿಗೆ ಪಾದಕಾಣಿಕೆಯಾಗಿ ಸಮರ್ಪಿಸಿದರು. ಹೆರೋದನ ಬಳಿಗೆ ಹಿಂದಿರುಗಬಾರದೆಂದು ಕನಸಿನಲ್ಲಿ ದೈವಾಜ್ಞೆಯಾದ್ದರಿಂದ, ಅವರು ಬೇರೆ ಮಾರ್ಗವಾಗಿ ತಮ್ಮ ದೇಶಕ್ಕೆ ಮರಳಿದರು.

ಮತ್ತಾಯ 2:9-12

ಈಗ ನಿಮ್ಮ ಮಕ್ಕಳು ಕನ್ನಡದಲ್ಲಿ ಬೈಬಲ್ ಆ್ಯಪ್ ಅನ್ನು ಅನುಭವಿಸಬಹುದು!

ಮಕ್ಕಳಿಗಾಗಿ ಬೈಬಲ್ ಆ್ಯಪ್

ಇಂದು, ನಮ್ಮ ಪಾಲುದಾರ OneHope ರೊಂದಿಗೆ, ಕನ್ನಡ ಭಾಷೆಯಲ್ಲಿ ಮಕ್ಕಳಿಗಾಗಿ ಬೈಬಲ್ ಆ್ಯಪ್ ನ ಪ್ರಾರಂಭವನ್ನು ಘೋಷಿಸಲು ನಾವು ಸಂತೋಷಪಡುತ್ತೇವೆ. ಈಗ, ಹಿಂದೆಂದಿಗಿಂತಲೂ ಹೆಚ್ಚಿನ ಮಕ್ಕಳಿಗೆ ತಮ್ಮದೇ ಆದ ಬೈಬಲ್ ಅನುಭವವನ್ನು ಆನಂದಿಸಲು ಅವಕಾಶವಿದೆ.

ಆ್ಯಪ್ ಸೆಟ್ಟಿಂಗ್‌ಗಳಲ್ಲಿ ಭಾಷೆಗಳನ್ನು ಬದಲಾಯಿಸುವುದು ಸುಲಭ:

  1. ನೀವು ಪ್ರಸ್ತುತ ಬಿಡುಗಡೆಯಾದ ನಿಮ್ಮ ಆ್ಯಪ್ ಅಪ್ ಡೇಟ್ ಮಾಡಲಾಗಿದೆ ಎಂಬುದನ್ನು ಖಾತ್ರಿಪಡಿಸಿಕೊಳ್ಳಿ.
  2. ಆಪ್ ತೆರೆಯಿರಿ ಮತ್ತು ಗೇರ್ ಐಕಾನ್ ಟ್ಯಾಪ್ ಮಾಡಿ (Gear icon) ತೆರೆಯಲು ಸೆಟ್ಟಿಂಗ್ಗಳು.
  3. ಭಾಷೆಯ ಮೇಲೆ ಕ್ಲಿಕ್ ಮಾಡಿ ತದನಂತರ ನಿಮಗೆ ಬೇಕಾದ ಭಾಷೆಯನ್ನು ಆರಿಸಿ.

ಆಡಿಯೋ ಈಗ ಆ ಭಾಷೆಯಲ್ಲಿ ಪ್ಲೇ ಆಗುತ್ತದೆ, ಮತ್ತು ಅದೇ ಭಾಷೆಯಲ್ಲಿ ವಾಕ್ಯಗಳೂ ಕಾಣಿಸುತ್ತವೆ!

ಈ ಶ್ರೇಷ್ಟ ಸುದ್ದಿಯನ್ನು ಆಚರಿಸಲು ದಯವಿಟ್ಟು ನಮಗೆ ಸಹಾಯ ಮಾಡಿ!

FacebookFacebook ನಲ್ಲಿ ಹಂಚಿಕೊಳ್ಳಿ

TwitterTwitter ನಲ್ಲಿ ಹಂಚಿಕೊಳ್ಳಿ

EmailEmail ಮೂಲಕ ಹಂಚಿಕೊಳ್ಳಿ


ಮಕ್ಕಳಿಗಾಗಿ ಬೈಬಲ್ ಆ್ಯಪ್ ಯೇಸು

ಮಕ್ಕಳಿಗಾಗಿ ಬೈಬಲ್ ಆ್ಯಪ್ ಬಗ್ಗೆ

OneHope, ಮಕ್ಕಳಿಗಾಗಿ ಬೈಬಲ್ ಆ್ಯಪ್ ರ ಸಹಭಾಗಿತ್ವದಲ್ಲಿ YouVersionರವರಿಂದ, ಬೈಬಲ್ ಅಪ್ಲಿಕೇಶನ್ತಯಾರಕರಿಂದ ಅಭಿವೃದ್ಧಿಪಡಿಸಲಾಗಿದೆ. ಮಕ್ಕಳಿಗೆ ಸಂತೋಷದಿಂದ ತುಂಬಿದ ಬೈಬಲ್ ಅನುಭವವನ್ನು ನೀಡಲು ವಿನ್ಯಾಸಗೊಂಡಿರುವ ಮಕ್ಕಳಿಗಾಗಿ ಬೈಬಲ್ ಆಪ್ ಈಗಾಗಲೇ 34 ಮಿಲಿಯನ್ ಆಪಲ್, ಆಂಡ್ರಾಯ್ಡ್ ಮತ್ತು ಕಿಂಡಲ್ ಸಾಧನಗಳಲ್ಲಿ ಇನ್ ಸ್ಟಾಲ್ ಆಗಿದೆ, ಮತ್ತು ಇದು ಯಾವಾಗಲೂ ಸಂಪೂರ್ಣವಾಗಿ ಉಚಿತವಾಗಿದೆ. ಪ್ರಪಂಚದಾದ್ಯಂತದ ಮಕ್ಕಳು ಈಗ 50 ಭಾಷೆಗಳಲ್ಲಿ ಮಕ್ಕಳಿಗಾಗಿ ಬೈಬಲ್ ಆಪ್ ಅನ್ನು ಆನಂದಿಸುತ್ತಿದ್ದಾರೆ – ಈಗ ಕನ್ನಡ ಭಾಷೆಯು ಸೇರ್ಪಡೆಯಾಗಿದೆ!

App Store Google Play Amazon

ಪ್ರಭುವಿಗೆ ಬಿಡು ಜೀವನಯಾತ್ರಾ ಚಿಂತೆಯನು

ಪ್ರಭುವಿಗೆ ಬಿಡು ಜೀವನಯಾತ್ರಾ ಚಿಂತೆಯನು

1  
ಕೇಡು ಮಾಡುವವರ ನೋಡಿ ಸಿಡಿಮಿಡಿಯಾಗಬೇಡ I ದುರಾಚಾರಿಗಳ ಕಂಡು ಮಚ್ಚರಗೊಳ್ಳಬೇಡ II

2  
ಅವರು ಒಣಗಿಹೋಗುವರು ಕಾಡುಗರಿಕೆಯಂತೆ I ಬೇಗ ಬಾಡಿಹೋಗುವರು ಕಾಯಿಪಲ್ಯದಂತೆ II

3  
ಒಳಿತನು ಮಾಡು ಪ್ರಭುವಿನಲಿ ಭರವಸೆ ಇಟ್ಟು I ಸುರಕ್ಷಿತನಾಗಿ ಬಾಳು ಸಿರಿನಾಡಿನಲ್ಲಿದ್ದು II

4  
ಪ್ರಭುವಿನಿಂದಲೆ ಬಯಸು ನಿನ್ನಾನಂದವನು I ನೆರವೇರಿಸುವನಾತ ನಿನ್ನ ಮನದಾಸೆಯನು II

5  
ಪ್ರಭುವಿಗೆ ಬಿಡು ಜೀವನಯಾತ್ರಾ ಚಿಂತೆಯನು I ಭರವಸೆಯಿಂದಿರು, ಆತನದನು ಸಾಗಿಸುವನು II

6  
ಬೆಳಗಿಸುವನು ನಿನ್ನ ಸತ್ಯಸಂಧತೆಯನು ಸೂರ್ಯೋದಯದಂತೆ I ಪ್ರಕಟಿಸುವನು ನಿನ್ನಾ ನ್ಯಾಯನಿಷ್ಠೆಯನು ನಡುಹಗಲಿನಂತೆ II

7  
ಪ್ರಭುವಿನ ಮುಂದೆ ಪ್ರಶಾಂತನಾಗಿರು, ಆತನಿಗೋಸ್ಕರ ಕಾದಿರು I ಸ್ವಾರ್ಥಿಗಳ, ಕುತಂತ್ರಿಗಳ ಏಳಿಗೆಯ ಕಂಡು ಉರಿಗೊಳ್ಳದಿರು II

8  
ಅಡಗಿಸು ಕೋಪವನು; ವರ್ಜಿಸು ಕ್ರೋಧವನು I ಕಿಡಿಕಿಡಿಯಾಗಬೇಡ, ತರುವುದದು ಕೇಡನು II

9  
ವಧಿತರಾಗಿ ನಾಶವಾಗುವರು, ಕೇಡು ಮಾಡುವವರು I ಪ್ರಭುವಿಗಾಗಿ ಕಾಯುವವರು ನಾಡಿಗೊಡೆಯರಾಗುವರು II

10  
ದುರುಳನು ಕಾಣದೆ ಹೋಗುವನು ಕೊಂಚಕಾಲದೊಳು I ಹುಡುಕಿದರು ಕಾಣಸಿಗನಾಗ ಊರು ಕೇರಿಗಳೊಳು II

11  
ದೀನದಲಿತರು ಬಾಧ್ಯಸ್ಥರಾಗುವರು ನಾಡಿಗೆ I ಆನಂದಿಸುವರು ಅಲ್ಲಿ ದೊರಕುವ ಸುಖಶಾಂತಿಗೆ II

Psalm 37 in Kannada

Psalm 37 in English